ದಿಲ್ಲಿ ಅಭಿವೃದ್ಧಿ ಪ್ರಾಧಿಕಾರ ಹೈಕೋರ್ಟ್ ಹಾಗೂ ರಾಷ್ಟ್ರೀಯ ಹಸಿರು ಪೀಠಕ್ಕೆ ತಿಳಿಸಿರುವ ಮಾಹಿತಿ ಹಾಗೂ ಅಂಕಿಅಂಶಗಳ ಪ್ರಕಾರ ಯಮುನಾ ನದಿಯ ಪ್ರವಾಹ ಪಾತ್ರದ ಶೇ. 75 ರಷ್ಟು ಪ್ರದೇಶ ಒತ್ತುವರಿಯಾಗಿದೆ.
ಅದರ ತೆರವಿಗೆ 2022 ರಿಂದ ಪ್ರಯತ್ನಗಳು ನಡೆದಿದೆ. ಇದೂವರೆಗೆ ಕೇವಲ 400 ಎಕರೆಯಷ್ಟು ಪ್ರದೇಶವನ್ನು ವಾಪಸು ಪಡೆಯಲು ಸಾಧ್ಯವಾಗಿದೆ. ಒಟ್ಟೂ ಪ್ರವಾಹ ಪಾತ್ರದ 9,...
ಖಂಡಿತಾ ಇದು ನಗರಗಳ ಕುರಿತ ಋಣಾತ್ಮಕ ನೆಲೆಯ ಮಾತಲ್ಲ. ಆದರೂ ಒಮ್ಮೆ ಆಲೋಚಿಸಿ. ನಮ್ಮ ನಗರಗಳಿಗೆ ಏನಾಗಿದೆ? ಏನಾಗುತ್ತಿದೆ? ಯಾಕೆ ಹೀಗಾಗುತ್ತಿದೆ?- ಈ ಮೂರು ಪ್ರಶ್ನೆಗಳನ್ನು ಎದುರಿಟ್ಟುಕೊಂಡು ನಗರವನ್ನು ಶೋಧಿಸುತ್ತಾ ಹೊರಟರೆ ನಮಗೆ ಪರಿಹಾರಗಳು ಸಿಗಬಹುದು. ಉತ್ತರವನ್ನು ಕಂಡುಕೊಂಡು ಅನುಭವಿಸುವ ಖುಷಿಗೆ ತಲುಪಬಹುದು. ಅದು ಸಾಧ್ಯವೇ? ಅದರಲ್ಲೂ ನಮ್ಮನ್ನಾಳುವವರಿಗೆ, ಆಡಳಿತ ಸಂಸ್ಥೆಗಳಿಗೆ ಸಾಧ್ಯವೇ?ಎಂಬುದು ಮತ್ತೂ...
ಎರಡು ದಿನಗಳಿಂದ ಮಳೆ ತೊಟ್ಟಿಕ್ಕತೊಡಗಿದೆ. ಕೆಲವು ಕಡೆ ತುಸು ಜೋರಾಗಿ, ಇನ್ನು ಕೆಲವೆಡೆ ತೊಟ್ಟಿಕ್ಕುವ ಮಾದರಿಯಲ್ಲಿ, ಇನ್ನೂ ಹಲವೆಡೆ ಬಂದು ಹೋದೆ ಎನ್ನುವುದಕ್ಕಷ್ಟೇ ಎನ್ನುವ ಹಾಗೆ ಮಳೆ ಬಂದಿದೆ. ಇದು ಮುಂಗಾರು ಪೂರ್ವ ಮಳೆ. ಹಾಗಾದರೆ ಮುಂಗಾರು ಚೆನ್ನಾಗಿರಬಹುದೆಂದು ರೈತರಾದಿಯಾಗಿ ಭಾವಿಸತೊಡಗಿದ್ದಾರೆ. ನಗರದ ಮಂದಿಯೂ ಮಳೆಯ ನೀರು ಚರಂಡಿಯಲ್ಲಿ ತುಂಬಿ ರಾಡಿ ಎಬ್ಬಿಸುವಾಗ ಬೈದುಕೊಳ್ಳಬಹುದು...
ನದಿ ಬನಾಯಾ ನಾಲಾ, ಕಿಸ್ನೆ ಕಿಯಾ ಗೋಟಾಲ, ಗೋಟಾಲ ಗೋಟಾಲ..ಸಿನಿಮಾ ಉತ್ಸಾಹಿ ನ ನಿತಿನ್ ದಾಸ್ ರೂಪಿಸಿರುವ 2.37 ನಿಮಿಷಗಳ ಹಾಡು 'ಗೋಟಾಲ..ಗೋಟಾಲ..ನದಿ ಬನಾಯಾ ನಾಲಾ' ಪುಣೆಯ ನದಿಗಳ ದುರಂತ ಕಥೆಯನ್ನು ಹೇಳುತ್ತದೆ. ದುರಂತಗಾಥೆಯನ್ನು ಅತ್ಯುತ್ತಮ ಸಂಗೀತ ಹಾಗೂ ಮಾಹಿತಿಯೊಂದಿಗೆ ನಾಗರಿಕರಿಗೆ ಮುಟ್ಟಿಸಲು ಪ್ರಯತ್ನಿಸಿದ್ದಾರೆ ನಿತಿನ್. ಈ ನದಿಯ ಹಾಡನ್ನು ನೋಡಿ ನಮ್ಮ ನದಿಯನ್ನು...
ಇಡುಕ್ಕಿ: ಕೇರಳದ ಇಡುಕ್ಕಿ ಜಿಲ್ಲೆ ತಿಳಿದಿರಬಹುದು. ನೆನಪು ಮಾಡಿಕೊಳ್ಳಿ. ನಾಲ್ಕು ವರ್ಷದ ಹಿಂದೆ ಬಿದ್ದ ದಿಢೀರ್ ಮಳೆಗೆ ಊರಿಗೇ ಊರೇ ಕೊಚ್ಚಿ ಹೋಗಿತ್ತು. ಒಮ್ಮೆಲೆ ಶುರುವಾದ ಮಳೆ ಅಬ್ಬರಿಸತೊಡಗಿದಾಗ ಇದೂ ಎಂದಿನ ಮಳೆ ಅಂದುಕೊಂಡಿದ್ದರು. ಆದರೆ ಕೆಲವೇ ಕ್ಷಣಗಳಲ್ಲಿ ಅದು ಸುಳ್ಳೆನಿಸಿ ಸೇತುವೆ, ಮನೆ ಮಾರು ಎಲ್ಲವೂ ಕುಸಿಯತೊಡಗಿದಾಗ ಪ್ರಳಯದ ಅನುಭವವಾಗಿತ್ತು.
ವಿಚಿತ್ರವೆಂದರೆ ಅದೇ ಜಿಲ್ಲೆಯಲ್ಲಿಈ...
ಇಂದ್ರನ ಅಮರಾವತಿ ಬಗ್ಗೆ ಕೇಳಿದ್ದೆವು. ಇದು ಚಂದ್ರನ ಅಮರಾವತಿ ಬಗ್ಗೆ. ಅಂದರೆ ತೆಲುಗು ದೇಶಂನ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಅಮರಾವತಿ. ಆಂಧ್ರ ಪ್ರದೇಶದ ಕನಸಿನ ರಾಜಧಾನಿ. ಅಮರಾವತಿ ಇಂದ್ರನ ರಾಜಧಾನಿಗಿಂತ ಚೆನ್ನಾಗಿ ಆಗಬಹುದೇ? ಇಂಥದೊಂದು ಪ್ರಶ್ನೆ ಉದ್ಭವಿಸಿತ್ತು. ಚಂದ್ರಬಾಬು ನಾಯ್ಡು ಕನಸಿದು. ಮುಖ್ಯಮಂತ್ರಿಯಾಗಿದ್ದಾಗ ನಗರ ನಿರ್ಮಾಣಕ್ಕೆ ಚಾಲನೆ ಕೊಟ್ಟರು. ಆದರೆ ನಂತರದ ಚುನಾವಣೆಯಲ್ಲಿ...
ನಗರಗಳಿಗೆ ಜೀವಜಲವಾದ ನದಿಗಳ ಮೂಲವೇ ನೀರಿನ ಕೊರತೆಯನ್ನು ಅನುಭವಿಸಲು ಆರಂಭಿಸದರೆ ಇದಕ್ಕೆ ಏನೆನ್ನಬೇಕು? ನಮ್ಮ ನಗರೀಕರಣದ ಹಪಹಪಿಸುವಿಕೆ ಇದಕ್ಕೆ ಕಾರಣವೆನ್ನಬೇಕೇ ಅಥವಾ ಲಭ್ಯ ನೀರನ್ನು ಸಂಪನ್ಮೂಲವನ್ನಾಗಿ ತಿಳಿಯದೇ ಅಂಧಾದುಂಧಿ ಮಾಡಿದುದರ ಪರಿಣಾಮವೇ? ನಮ್ಮ ನಿರ್ಲಕ್ಷ್ಯವೇ, ಅಸಡ್ಡೆಯೇ? ಎಂದು ವಿಶ್ಲೇಷಿಸಿದ್ದಾರೆ ಶ್ಯಾಮಸುಂದರ್. ಕೊಡಗು ಮರುಗುತ್ತಿದೆ; ಕಾಫಿ ಕರಟುತ್ತಿದೆ ; ಕಾವೇರಿ ಸೊರಗುತ್ತಿದ್ದಾಳೆ !
ಒಂದೇ ಸಾಲಿನಲ್ಲಿ ಸರಳವಾಗಿ...
ಸಾರ್ವಜನಿಕ ಸಾರಿಗೆ ವ್ಯವಸ್ಥೆ ಬಲಪಡಿಸದೇ ನಾವೆಷ್ಟೇ ತಿಪ್ಪರಲಾಗ ಹಾಕಿದರೂ ನಗರೀಕರಣದಲ್ಲಿನ ಅವ್ಯವಸ್ಥೆಯನ್ನು ಸರಿದಾರಿಗೆ ತರಲಾಗದು. ಈ ಅವ್ಯವಸ್ಥೆಯ ನಗರೀಕರಣದಿಂದ ಸೃಷ್ಟಿಯಾಗುವ ಇಬ್ಬರು ರಾಕ್ಷಸರೆಂದರೆ ವಾಹನ ದಟ್ಟಣೆ ಮತ್ತು ತ್ಯಾಜ್ಯ ವಿಲೇವಾರಿ. ಇವರಿಬ್ಬರ ಸಂಹಾರಕ್ಕೆ ಬರೀ ಸರಕಾರದಿಂದಲೋ, ಆಡಳಿತದಿಂದಲೋ ಸಾಧ್ಯವಾಗದು. ಸಾರ್ವಜನಿಕರ ಸಹಕಾರ ಅವಶ್ಯ. ಅಂಥದೊಂದು ಪರಸ್ಪರ ನಂಬಿಕೆಯ ವ್ಯವಸ್ಥೆ ಮೊದಲು ನಿರ್ಮಾಣವಾಗಬೇಕು.
ಇಂದು ನಗರಗಳಲ್ಲಿ ಕಾಡುತ್ತಿರುವುದೇ...
ನದಿಗಳ ಅಗತ್ಯವೇ ನಮಗಿನ್ನೂ ಅರ್ಥವಾಗಿಲ್ಲ. ಐದು ವರ್ಷಗಳಲ್ಲಿ ಈ ಮಾಲಿನ್ಯಗೊಳಿಸುವ ನಮ್ಮ ಚಟ ದುಪ್ಪಟ್ಟು ಬೆಳೆದಿದೆ ಎಂದರೆ ನಂಬಲೇಬೇಕು.
*
ನಮ್ಮ ದೇಶದಲ್ಲಿ ಯಾವ ನದಿ ಇನ್ನೂ ಪವಿತ್ರವಾಗಿರಬಹುದು? ಮಲಿನಗೊಳ್ಳದಿರಬಹುದು? ಎಂದು ಅಧ್ಯಯನ ಮಾಡ ಹೊರಟರೆ ನಮಗೆ ಸಿಗುವುದು ಶೂನ್ಯವೇ ಹೊರತು ಮತ್ತೇನೂ ಅಲ್ಲ. ಅನಿಯಂತ್ರಿತ ನಗರೀಕರಣ ಸೃಷ್ಟಿಸುತ್ತಿರುವ ಸಮಸ್ಯೆಗಳು ಬೇರೆ ಎಂದು ಕೆಲವೊಮ್ಮೆ ಯೋಚಿಸಬಹುದು. ಆದರೆ,...
ನೀತಿ ಆಯೋಗದ ಇತ್ತೀಚಿನ ವರದಿಯ ಅಂಶ ಗಮನಿಸಿದರೆ ಹತ್ತು ವರ್ಷಗಳಲ್ಲಿ ಕನಿಷ್ಠ ಒಂದಿಷ್ಟು ನಗರಗಳಾದರೂ “ನಮ್ಮಲ್ಲಿ ನೀರು ಲಭ್ಯವಿಲ್ಲ’ ಎಂಬ ಫಲಕಗಳನ್ನು ತೂಗು ಹಾಕಬೇಕು. ಅದರೊಂದಿಗೇ “ಒಂದು ಹನಿ ನೀರು ಇದ್ದರೆ ಸಾಲ ಕೊಡಿ’ ಎಂಬ ಫಲಕಗಳನ್ನೂ ಹಾಕಬೇಕು !
*
ಕೇಂದ್ರದ ನೀತಿ ಆಯೋಗ ಮೂರು ತಿಂಗಳ ಹಿಂದೆ ಒಂದು ವರದಿಯನ್ನು ಬಿಡುಗಡೆ ಮಾಡಿತು. ಅದರಲ್ಲಿನ...
ಮುಂಬಯಿ: ಯಾಕೋ ಈರುಳ್ಳಿ ಬೆಳೆಗಾರರ ಕಷ್ಟ ಬಗೆಹರಿಯುವಂತೆ ಕಾಣುತ್ತಿಲ್ಲ. ಹಾಗಾಗಿ ಸಾಮಾನ್ಯವಾಗಿ ಗ್ರಾಹಕರು ಈರುಳ್ಳಿಯನ್ನುಕತ್ತರಿಸುವಾಗ ಪಡುವ ಸಂಕಟ-ಸಂಕಷ್ಟವನ್ನು ಬೆಳೆಗಾರರು ಅದನ್ನು ಮಾರುವಾಗ ಎದುರಿಸುತ್ತಿದ್ದಾರೆ.
ಪ್ರತಿ ಬಾರಿ ಈರುಳ್ಳಿ...